2023-24ನೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಪ್ರತಿಶತ (ಶೇ.100 ) ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳಾದ ಗಾನಶ್ರೀ ಕೆ.ಎಸ್ 625ಕ್ಕೆ 607 ಅಂಕ(ಶೇ 97.01), ಸಂಜನ ಎಂ 602 ಅಂಕಗಳು(ಶೇ 96.32), ದಿವ್ಯಶ್ರಿ ಎ.ಎಸ್ 596 ಅಂಕ(ಶೇ 95.36) ಚಿನ್ಮಯಿ ಜಿ 596 ಅಂಕ(ಶೇ 95.36), ಯಶೋಧ ಎಂ ಹೆಚ್ 584 ಅಂಕಗಳನ್ನು (ಶೇ 93.44) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಶಾಲೆಯಿಂದ ಒಟ್ಟು 30 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ( A+) 9 ವಿಧ್ಯಾರ್ಥಿಗಳು, ಉನ್ನತ ಶ್ರೇಣಿಯಲ್ಲಿ( A) 21 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧಕ ವಿಧ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಕೆ.ಜಿ ಶ್ರೀನಿವಾಸಮೂರ್ತಿ, ಅಧ್ಯಕ್ಷರಾದ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯರಾದ ಶೋಭಾವತಿ ಎಂ ಹಾಗು ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲೂ ಪ್ರತಿಶತ ಫಲಿತಾಂಶ ದಾಖಲಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…