2023-24ನೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಪ್ರತಿಶತ (ಶೇ.100 ) ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳಾದ ಗಾನಶ್ರೀ ಕೆ.ಎಸ್ 625ಕ್ಕೆ 607 ಅಂಕ(ಶೇ 97.01), ಸಂಜನ ಎಂ 602 ಅಂಕಗಳು(ಶೇ 96.32), ದಿವ್ಯಶ್ರಿ ಎ.ಎಸ್ 596 ಅಂಕ(ಶೇ 95.36) ಚಿನ್ಮಯಿ ಜಿ 596 ಅಂಕ(ಶೇ 95.36), ಯಶೋಧ ಎಂ ಹೆಚ್ 584 ಅಂಕಗಳನ್ನು (ಶೇ 93.44) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಶಾಲೆಯಿಂದ ಒಟ್ಟು 30 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ( A+) 9 ವಿಧ್ಯಾರ್ಥಿಗಳು, ಉನ್ನತ ಶ್ರೇಣಿಯಲ್ಲಿ( A) 21 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧಕ ವಿಧ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಕೆ.ಜಿ ಶ್ರೀನಿವಾಸಮೂರ್ತಿ, ಅಧ್ಯಕ್ಷರಾದ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯರಾದ ಶೋಭಾವತಿ ಎಂ ಹಾಗು ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲೂ ಪ್ರತಿಶತ ಫಲಿತಾಂಶ ದಾಖಲಿಸಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…