2023-24ನೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಪ್ರತಿಶತ (ಶೇ.100 ) ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳಾದ ಗಾನಶ್ರೀ ಕೆ.ಎಸ್ 625ಕ್ಕೆ 607 ಅಂಕ(ಶೇ 97.01), ಸಂಜನ ಎಂ 602 ಅಂಕಗಳು(ಶೇ 96.32), ದಿವ್ಯಶ್ರಿ ಎ.ಎಸ್ 596 ಅಂಕ(ಶೇ 95.36) ಚಿನ್ಮಯಿ ಜಿ 596 ಅಂಕ(ಶೇ 95.36), ಯಶೋಧ ಎಂ ಹೆಚ್ 584 ಅಂಕಗಳನ್ನು (ಶೇ 93.44) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಶಾಲೆಯಿಂದ ಒಟ್ಟು 30 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ( A+) 9 ವಿಧ್ಯಾರ್ಥಿಗಳು, ಉನ್ನತ ಶ್ರೇಣಿಯಲ್ಲಿ( A) 21 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧಕ ವಿಧ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಕೆ.ಜಿ ಶ್ರೀನಿವಾಸಮೂರ್ತಿ, ಅಧ್ಯಕ್ಷರಾದ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯರಾದ ಶೋಭಾವತಿ ಎಂ ಹಾಗು ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲೂ ಪ್ರತಿಶತ ಫಲಿತಾಂಶ ದಾಖಲಿಸಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…