2023-24ನೇ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, SSLC ಪರೀಕ್ಷೆಯಲ್ಲಿ ತಾಲ್ಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ಪ್ರತಿಶತ (ಶೇ.100 ) ಫಲಿತಾಂಶ ಪಡೆದು ಸಾಧನೆ ಮಾಡಿದೆ.
ಗ್ರಾಮೀಣ ಭಾಗದ ಶಾಲೆಯ ವಿದ್ಯಾರ್ಥಿಗಳಾದ ಗಾನಶ್ರೀ ಕೆ.ಎಸ್ 625ಕ್ಕೆ 607 ಅಂಕ(ಶೇ 97.01), ಸಂಜನ ಎಂ 602 ಅಂಕಗಳು(ಶೇ 96.32), ದಿವ್ಯಶ್ರಿ ಎ.ಎಸ್ 596 ಅಂಕ(ಶೇ 95.36) ಚಿನ್ಮಯಿ ಜಿ 596 ಅಂಕ(ಶೇ 95.36), ಯಶೋಧ ಎಂ ಹೆಚ್ 584 ಅಂಕಗಳನ್ನು (ಶೇ 93.44) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಶಾಲೆಯಿಂದ ಒಟ್ಟು 30 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ( A+) 9 ವಿಧ್ಯಾರ್ಥಿಗಳು, ಉನ್ನತ ಶ್ರೇಣಿಯಲ್ಲಿ( A) 21 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಧಕ ವಿಧ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಕೆ.ಜಿ ಶ್ರೀನಿವಾಸಮೂರ್ತಿ, ಅಧ್ಯಕ್ಷರಾದ ಉಷಾ ಶ್ರೀನಿವಾಸಮೂರ್ತಿ, ಮುಖ್ಯೋಪಾಧ್ಯಾಯರಾದ ಶೋಭಾವತಿ ಎಂ ಹಾಗು ಶಾಲೆಯ ಸಹ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕಳೆದ ಸಾಲಿನಲ್ಲೂ ಪ್ರತಿಶತ ಫಲಿತಾಂಶ ದಾಖಲಿಸಿದ್ದರು.
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…