17ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ಒಳಚರಂಡಿ ನೀರು: ಸಾರ್ವಜನಿಕರಿಗೆ ಕಿರಿಕಿರಿ

ನಗರದ 17 ನೇ ವಾರ್ಡ್ ಗಾಂಧಿನಗರದ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ಛೇಂಬರ್ ತುಂಬಿ ಉಕ್ಕಿ ಹರಿಯುತ್ತಿದೆ.

ನಡು ರಸ್ತೆಯಲ್ಲಿ ಇರುವ ಒಳಚರಂಡಿ ಛೇಂಬರ್ ತುಂಬಿ ಬುಗ್ಗೆಗಳ ಮೂಲಕ ಹೊರಬರುತ್ತಿದೆ. ಇದರಿಂದ ರಸ್ತೆಯಲ್ಲಿ ದುರ್ನಾತ ಏರ್ಪಟ್ಟಿದೆ, ದುರ್ವಾಸನೆಯಿಂದ ಸಾರ್ವಜನಿಕರು, ವಾಹನ ಸವಾರರು ರಸ್ತೆಯಲ್ಲಿ ಮೂಗು ಮುಚ್ಚಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ಎರಡು ದಿನಗಳಿಂದ ಒಳಚರಂಡಿ ಛೇಂಬರ್ ತುಂಬಿ ಕೆಟ್ಟ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದನ್ನು ಕಂಡು ಕೇಳರಿಯದೆ ಇರುವ ನಗರಸಭೆ. ನಗರಸಭೆ ಬೇಜವಾಬ್ದಾರಿ ತನಕ್ಕೆ ಸಾರ್ವಜನಿಕರು ಕಿರಿಕಿರಿ ಅನುಭವಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಾರ್ಡ್ ನಿವಾಸಿಗಳು.

ಕೂಡಲೇ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಬಂದು ಒಳಚರಂಡಿ ನೀರು ರಸ್ತೆಗೆ ಬರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ, ರಸ್ತೆಯಲ್ಲಿ ಸಾರ್ವಜನಿಕರು, ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವುಮಾಡಿಕೊಡಬೇಕು ಎಂದು ಆಗ್ರಹಿಸಿದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

2 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

3 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

15 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago