17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…