17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…