Categories: ಕೋಲಾರ

17 ವರ್ಷದ ಬಾಲಕನನ್ನ ಕೊಚ್ಚಿ ಕೊಲೆ: ಕೊಲೆಗೂ ಮುನ್ನಾ ಬಾಲಕನಿಗೆ ಚಿತ್ರಹಿಂಸೆ: ಮುಗಿಲು ಮುಟ್ಟಿದ ಮೃತ ಬಾಲಕನ ತಂದೆ-ತಾಯಿ ಆಕ್ರಂದನ

17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಅರುಣ್‌ ಸಿಂಗ್‌ ಮತ್ತು ಸುಶೀಲಾ ದಂಪತಿ ಪುತ್ರ ಕಾರ್ತಿಕ್‌ ಸಿಂಗ್‌(17), ಕೊಲೆಯಾದ ಬಾಲಕ. ಕೊಲೆ ಮಾಡಿರುವ ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದು, ಆರೋಪಿಗಳ ಜಾಡು ಹಿಡಿಯಲು ಕೋಲಾರ ನಗರ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.

ಐವರ ಗ್ಯಾಂಗ್‌ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್‌ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.

ಕೋಲಾರದ ಬೈಪಾಸ್‌ ರಸ್ತೆಯಲ್ಲಿರುವ ಎಸ್‌ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್‌ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್‌ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.

‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್‌ ಆಫ್‌ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್‌ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

15 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

15 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

21 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

22 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago