17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…