17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…