17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…