17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…
ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…
ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…