17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…