17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಐವರ ಗ್ಯಾಂಗ್ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು. ಡಾನ್ ಆಗಬೇಕೆಂಬ ಹುಚ್ಚಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಒದಗಿಬಂದಿದೆ.
ಕೋಲಾರದ ಬೈಪಾಸ್ ರಸ್ತೆಯಲ್ಲಿರುವ ಎಸ್ಡಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಕಾರ್ತಿಕ್ನನ್ನು ಆರೋಪಿಗಳು ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಕರೆಸಿಕೊಂಡು ಮನಸೋಇಚ್ಛೆ ತಳಸಿ, ಚಿತ್ರಹಿಂಸೆ ಮಾಡಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಬಟ್ಟೆ ಬಿಚ್ಚಿಸಿ ಮೈ ಕೈಗೆ ಗಾಜು, ಚಾಕು, ಬ್ಲೇಡ್ನಿಂದ ಕುಯ್ದಿದ್ದಾರೆ. ಚಿತ್ರಹಿಂಸೆ ನೀಡುತ್ತಿರುವುದನ್ನ ವಿಡಿಯೊ ಕೂಡ ಮಾಡಿದ್ದಾರೆ.
‘ನನ್ನ ಪುತ್ರ ಶುಕ್ರವಾರ ಹೊಟ್ಟೆ ನೋವು ಎಂದು ಕಾಲೇಜಿಗೆ ಹೋಗಿರಲಿಲ್ಲ. ಮಧ್ಯಾಹ್ನದವರೆಗೆ ಮನೆಯಲ್ಲೇ ಮಲಗಿಕೊಂಡಿದ್ದ. ಸಂಜೆ ಎಲ್ಲೋ ಹೋಗಿದ್ದ. ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಆತನ ಕೊಲೆಯಾಗಿರುವ ಬಗ್ಗೆ ರಾತ್ರಿ 8.30ರ ಸುಮಾರಿಗೆ ಸಂಬಂಧಿಯೊಬ್ಬರು ಹೇಳಿದರು. ಪುತ್ರನ ಜೊತೆ ಇರುತ್ತಿದ್ದ ವ್ಯಕ್ತಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಆತನಿಗೆ ಶಿಕ್ಷೆ ಕೊಡಿ’ ಎಂದು ಕಾರ್ತಿಕ್ ತಾಯಿ ಸುಶೀಲಾ ಗೋಳು ತೋಡಿಕೊಂಡಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…