Categories: ತುಮಕೂರು

17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಚಾಲನೆ

2018ರ ಜನವರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಈ ಸಮಸ್ಯೆಯಿಂದ ಜನರನ್ನು ಹೊರತರಲು ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆ ಇದಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಹಿಂದಿನ ಅವಧಿಯಲ್ಲಿಯೂ ನಮ್ಮ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೆ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ತುಮಕೂರಿನ ಪಾವಗಡದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.

2050ರವರೆಗೆ ಈ ಯೋಜನೆಯ ಲಾಭವನ್ನು ಜನರು ಪಡೆಯಬಹುದಾಗಿದೆ. ಈ ಯೋಜನೆಯಿಂದ ಸುಮಾರು 17.50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿದಂತಾಗುತ್ತದೆ. ಶುದ್ಧ ಕುಡಿಯುವ ನೀರಿನ ಯೋಜನೆಯಿಂದ ಜನರು ಅಂಗವೈಕಲ್ಯತೆಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪಾರಾಗಿದ್ದಾರೆ. ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಈ ಯೋಜನೆಗೆ ಹಗಲಿರುಳು ದುಡಿದ ಸಚಿವರು ಹಾಗೂ ಶಾಸಕರ ಪ್ರಯತ್ನಗಳು ಇಂದು ಫಲಿಸಿದೆ ಎಂದರು.

ಈ ಯೋಜನೆಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸುವ ಸುಯೋಗ ನನಗೆ ದೊರೆತಿರುವುದು ಸಂತೋಷ ತಂದಿದೆ ಎಂದರು.

ನಮ್ಮ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? ಬಿಜೆಪಿಯವರು ರಾಜ್ಯದಲ್ಲಿ 9 ವರ್ಷಗಳು ಅಧಿಕಾರಿದಲ್ಲಿದ್ದರೂ ಇಂತಹ ಯೋಜನೆಯನ್ನು ಜಾರಿಗೆ ತರಲು ಅವರಿಂದ ಸಾಧ್ಯವಾಗಿಲ್ಲ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದರು, ಈಗ ಅದನ್ನೇ ಕಾಪಿ ಮಾಡುತ್ತಿದ್ದಾರೆ. ಹಿಂದೆ ಅಧಿಕಾರ ನಡೆಸಿದ ರಾಜ್ಯದ ಬಿಜೆಪಿಯವರ ಸಾಧನೆ ಏನು? ಎಂದು ಪ್ರಶ್ನಿಸಿದರು.

ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ. ಈಗಾಗಲೇ 2,050 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ 2,400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ. ನಂಜುಂಡಪ್ಪನವರ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು. ಈಗ ತುಮಕೂರಿನ ತಾಲ್ಲೂಕಿನ ಪಟ್ಟಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ನಮ್ಮ ಸರ್ಕಾರವೇ ಕಾರಣ. ಈ ಭಾಗಕ್ಕೆ ಸೇರಿದ ನಮ್ಮ ಪಕ್ಷದ ಸಚಿವರು ಹಾಗೂ ಶಾಸಕರಿಗೆ ಜನರು ಸದಾ ಆಶೀರ್ವಾದ ಮಾಡಬೇಕು ಎಂದು ಹೇಳಿದರು.

2004 ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ, ಜೆಡಿಎಸ್ ಪಕ್ಷ 59 ಸ್ಥಾನಗಳನ್ನು ಗೆದ್ದಿತ್ತು, ಆದ್ರೆ ಹಿಂದಿನ ಚುನಾವಣೆಯಲ್ಲಿ ಅವರು ಕೇವಲ 18 ಸ್ಥಾನಗಳನ್ನು ಗೆದ್ದರು. ಪಾವಗಡ ಕ್ಷೇತ್ರದಲ್ಲಿ ಜಿಡಿಎಸ್ ಪಕ್ಷ ಗೆಲ್ಲಲು ಸಾಧ್ಯವಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ಹಾಗೂ ಜೆಡಿಎಸ್ ಅನ್ನು ಕಂಗೆಡಿಸಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ನಂತರ ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸುತ್ತದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದರು. ಅಪಪ್ರಚಾರ, ತಪ್ಪು ಮಾಹಿತಿಯನ್ನು ಜನರಿಗೆ ನೀಡಬಾರದು ಎಂದು ಈಗಾಗಲೇ ಬಹಿರಂಗ ಚರ್ಚೆಗೆ ಬರಲು ಆಹ್ವಾನ ನೀಡಿದ್ದೇನೆ ಎಂದರು.

ನಮ್ಮ ಸರ್ಕಾರ ಒಂದು ಧರ್ಮದ ಪರವಾಗಿ ಕೆಲಸ ಮಾಡುತ್ತಿಲ್ಲ. ಅಕ್ಕಿ, ವಿದ್ಯುತ್, ಶಕ್ತಿ, ನಿರುದ್ಯೋಗ ಭತ್ಯೆ, ಗೃಹಲಕ್ಷ್ಮಿ ಯೋಜನೆಯನ್ನು ಬಿಜೆಪಿಯ ಬಡವರಿಗೂ ನೀಡಲಾಗಿದೆ. ಒಂದು ಪಕ್ಷಕ್ಕೆ, ಒಂದು ಜಾತಿ, ಒಂದು ಧರ್ಮಕ್ಕೆ ನೀಡಿಲ್ಲ. ರಾಜ್ಯ ಸರ್ವತೋಮುಖ ಅಭಿವೃದ್ಧಿಯಾಗಲು, ಹಿಂದುಳಿದ ತಾಲ್ಲೂಕುಗಳು ಮುಂದುವರೆಯಲು ಈ ಎಲ್ಲಾ ಕಾರ್ಯಕ್ರಮಗಳಿಂದ ಸಾಧ್ಯವಾಗಿದೆ. ಕರ್ನಾಟಕದ 240 ತಾಲ್ಲೂಕು, 224 ವಿಧಾನಸಭಾ ಕ್ಷೇತ್ರಗಳಿಗೆ ಎಲ್ಲಾ ಕಾರ್ಯಕ್ರಮಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳ ಒದಗಿಸುವುದಾಗಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರೂ ಇಲ್ಲಿಯವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ಎತ್ತಿನಹೊಳೆ ಯೋಜನೆಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುತ್ತೇವೆ. 23 ಕೆರೆಗಳಿಗೆ ಸಣ್ಣ ನೀರಾವರಿ ಇಲಾಖೆ ಮೂಲಕ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದರು.

2028 ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಚುನಾವಣೆಗೆ ನಾವು ಹೆದರುವುದಿಲ್ಲ. ವಿಜಯೇಂದ್ರ ಕುರ್ಚಿ ಅಲ್ಲಾಡುತ್ತಿದ್ದು, 2028 ರ ವರೆಗೆ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ತಿಳಿದಿಲ್ಲ. ನಾಳೆ ಚುನಾವಣೆಯಾದರೂ ನಾವು ಗೆದ್ದೆ ಗೆಲ್ಲುತ್ತೇವೆ. ಆದರೆ ಜನ ನಮಗೆ 2028 ರ ಮೇ ವರೆಗೆ ಅಧಿಕಾರ ನೀಡಿದ್ದಾರೆ. ಅದರಂತೆ ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುತ್ತೇವೆ. 2028 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿ ಪುನಃ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದರು.

2050 ಮೆಗಾ ವ್ಯಾಟ್ ಸೌರಶಕ್ತಿ ಉತ್ಪಾದಿಸುವ ಘಟಕವನ್ನು ಲೋಕಾರ್ಪಣೆ ಮಾಡಲಾಗಿದೆ.
ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಪಾವಗಡ ತಾಲೂಕು ಮುಂದುವರೆಯುವ ಬಗ್ಗೆ ಸಂತೋಷವಿದೆ ಎಂದು ಹೇಳಿದರು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

52 minutes ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

3 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

7 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

9 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago