ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.
ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…