179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: ಮೇ 02 ರಿಂದ 04 ರವರೆಗೆ ತಾಲ್ಲೂಕು ಆಡಳಿತ ಸೌಧದಲ್ಲಿ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.

ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

Ramesh Babu

Journalist

Recent Posts

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

2 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

4 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

16 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

17 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

22 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 day ago