ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.
ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…