179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: ಮೇ 02 ರಿಂದ 04 ರವರೆಗೆ ತಾಲ್ಲೂಕು ಆಡಳಿತ ಸೌಧದಲ್ಲಿ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.

ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

Ramesh Babu

Journalist

Recent Posts

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

36 minutes ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

17 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

18 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

22 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago