179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: ಮೇ 02 ರಿಂದ 04 ರವರೆಗೆ ತಾಲ್ಲೂಕು ಆಡಳಿತ ಸೌಧದಲ್ಲಿ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.

ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

7 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

18 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

18 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

23 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago