179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: ಮೇ 02 ರಿಂದ 04 ರವರೆಗೆ ತಾಲ್ಲೂಕು ಆಡಳಿತ ಸೌಧದಲ್ಲಿ ಅಂಚೆ ಮತದಾನ

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವವರಿಗೆ ಅಂಚೆ ಮತದಾನ ಕಾರ್ಯವು 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 02 ರಿಂದ 04 ರವರೆಗೆ ನಡೆಯಲಿದ್ದು, ಅಂಚೆ ಮತದಾನ ಕೇಂದ್ರದ ಮೇಲ್ವಿಚಾರಣೆಗಾಗಿ, ಗೆಜೆಟೆಡ್ ಅಧಿಕಾರಿ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ, 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವನಹಳ್ಳಿಯ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಗ್ರೇಡ್-2 ರವರ ಕೊಠಡಿಯಲ್ಲಿ, 2023ರ ಮೇ 02, 03 ಹಾಗೂ 04 ರಂದು ಬೆಳಿಗ್ಗೆ 9.00 ಗಂಟೆಯಿಂದ 5.00 ಗಂಟೆಯವರೆಗೆ ಅಂಚೆ ಮತದಾನ ನಡೆಯಲಿದೆ.

ಅಂಚೆ ಮತದಾನ ಸೌಲಭ್ಯ ಕೇಂದ್ರದ ಮೇಲ್ವಿಚಾರಣೆಗಾಗಿ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಇಲಾಖೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಹಾಗೂ ದೇವನಹಳ್ಳಿ ತಾಲ್ಲೂಕು ಕಚೇರಿಯ ಗ್ರೇಡ್-2 ತಹಶೀಲ್ದಾರ್ ಉಷಾ ಅವರನ್ನು ಅಂಚೆ ಮತದಾನ ಕಾರ್ಯ ನಿರ್ವಹಿಸಲು, ಗೆಜೆಟೆಡ್ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ವಿವಿಧ ಇಲಾಖೆಗಳಲ್ಲಿ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನಾಂಕದಂದು ಕಾರ್ಯನಿರ್ವಹಿಸುತ್ತಿರುವ ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ನಿಗದಿತ ಸಮಯ, ಸ್ಥಳದಲ್ಲಿ ಹಾಜರಾಗಿ ಅಂಚೆ ಮತದಾನ ಕಾರ್ಯನಿರ್ವಹಿಸುವಂತೆ ಸೂಚಿಸಿ 179-ದೇವನಹಳ್ಳಿ(ಪ.ಜಾ) ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರತಿಭಾ ಅವರು ಆದೇಶಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

17 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

19 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

23 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago