18ನೇ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅಭಿನಂದನೆ

18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್‌ಡಿಐಎ ಮೈತ್ರಿಕೂಟದ ಕಾಂಗ್ರೆಸ್‌ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.

ಓಂ ಬಿರ್ಲಾ ಅವರು ಎನ್ ಡಿಎ ಮೈತ್ರಿ ಸರ್ಕಾರದಲ್ಲಿ ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗುತ್ತಿದ್ದು, ಅವರನ್ನು ಸ್ಪೀಕರ್ ಕುರ್ಚಿ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕರೆದುಕೊಂಡು ಬಂದು ಗೌರವಿಸಿ ಅಭಿನಂದಿಸಿದರು.

ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್‌ಎಸ್‌ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

11 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

24 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago