18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಕೇರಳದ ಐಎನ್ಡಿಐಎ ಮೈತ್ರಿಕೂಟದ ಕಾಂಗ್ರೆಸ್ನ ಹಿರಿಯ ಸಂಸದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಹಂಗಾಮಿ ಸ್ಪೀಕರ್ ಅವರು ಧ್ವನಿ ಮತದ ಮೂಲಕ ಸಂಸದರ ಮತಗಳನ್ನು ಅಂಗೀಕರಿಸಿದರು.
ಕೋಚಿಂಗ್ ಫ್ಟಾಕ್ಟರಿಗೆ ಹೆಸರುವಾಸಿಯಾಗಿರುವ ರಾಜಸ್ಥಾನದ ಕೋಟಾ ಕ್ಷೇತ್ರದಿಂದ ಸಂಸದರಾಗಿರುವ 61 ವರ್ಷದ ಓಂ ಬಿರ್ಲಾ ಅವರು ಮೂರನೇ ತಲೆಮಾರಿನ ಆರ್ಎಸ್ಎಸ್ ಕುಟುಂಬದಿಂದ ಬಂದವರು. ಅದಕ್ಕೂ ಮುನ್ನ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಶಾಸಕರಾಗಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…