18 ಮಂದಿ ಶಾಸಕರ ಅಮಾನತು ವಿಚಾರ: ಅಮಾನತು ಆದೇಶ ಹಿಂಪಡೆಯುವಂತೆ ವಿಧಾನಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದ ಆರ್.ಅಶೋಕ್

ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಮುಖೇನ ಮನವಿ ಸಲ್ಲಿಸಿದ್ದೇನೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಜನಸಾಮಾನ್ಯರ ಹಿತದೃಷ್ಟಿಯಿಂದ ಸಭಾಧ್ಯಕ್ಷರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಮತ್ತು ಆ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಮನವಿ ಪತ್ರದಲ್ಲೇನಿದೆ…?

ಮಾ.21ರಂದು ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ.

ಈ ಸಂದರ್ಭದಲ್ಲಿ ತಾವು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನೂ ವಿಧಿಸಲಾಗಿರುತ್ತದೆ.

ರಾಜ್ಯದ ವಿಧಾನಮಂಡಲದ ಉಭಯ ಸದನಗಳು ಪ್ರಜಾಪ್ರಭುತ್ವದ ಅತ್ಯುನ್ನತ ಸ್ಥಳಗಳು. ಈ ಸ್ಥಳಗಳು “ಪ್ರಜಾಪ್ರಭುತ್ವದ ದೇಗುಲಗಳು” ಎಂದು ಕರೆದರೆ ತಪ್ಪೇನೂ ಇಲ್ಲ. ಈ ದೇಗುಲಗಳಲ್ಲಿನ ಸಭಾಧ್ಯಕ್ಷರು ಮತ್ತು ಸಭಾಪತಿಗಳಿಗೆ ಇರುವ ಸ್ನಾನವೂ ಅಷ್ಟೇ ಗೌರವಾನ್ವಿತವಾದುದು. ಈ ವಿಚಾರದಲ್ಲಿ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ.

ಮಾ.21ರಂದು ನಡೆದ ಘಟನೆ ಉದ್ದೇಶಪೂರ್ವಕವಾದುದು ಅಲ್ಲ ಅಥವಾ ನಿಮ್ಮ ಪೀಠಕ್ಕೆ, ಅಗೌರವ ತರುವ ಉದ್ದೇಶವೂ ಯಾವ ಶಾಸಕರಿಗೂ ಇರಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ತಾವು ಸದನದ ಕಲಾಪ ನಿರ್ವಹಿಸುವುದನ್ನು ನಾವು ಅತ್ಯಂತ ಹತ್ತಿರದಿಂದ ನೋಡಿದ್ದೇವೆ. ಸಂಸದೀಯ ಚರ್ಚೆಯ ಗುಣಮಟ್ಟ ಭಾಷೆಯ ಬಳಕೆ, ಕಲಾಪಗಳಲ್ಲಿನ ನಿಯಮಗಳ ಪಾಲನೆ ಇತ್ಯಾದಿಗಳೆಲ್ಲವು ದಿನದಿಂದ ದಿನಕ್ಕೆ ಕುಸಿಯುತ್ತಿರುವ ಈ ದಿನಗಳಲ್ಲಿ ಯಾರಿಗೇ ಆಗಲೀ ಇದು ಅತ್ಯಂತ ಕಷ್ಟದ ಕೆಲಸ ಎಂಬುದು ಅರ್ಥವಾಗುತ್ತದೆ. ಅದಕ್ಕಾಗಿಯೇ ನಿಮ್ಮ ಬಗ್ಗೆ ನಮಗೆ ಅಪಾರವಾದ ಗೌರವವಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago