18 ವರ್ಷದೊಳಗಿನ ಮಕ್ಕಳ ಬೈಕ್ ಸಂಚಾರಕ್ಕೆ ಬ್ರೇಕ್:  ಅಪ್ರಾಪ್ತರಿಗೆ ಬೈಕ್ ಕೊಟ್ಟರೆ ಪಾಲಕರಿಗೆ ಬೀಳುತ್ತೆ ದಂಡ ಅಥವಾ ಜೈಲು ಶಿಕ್ಷೆ…ಹುಷಾರ್…!

ಶಾಲಾ, ಕಾಲೇಜಿನಲ್ಲಿ ಓದುತ್ತಿರುವ (18 ವರ್ಷದೊಳಗಿನವರು) ಬಾಲಕ, ಬಾಲಕಿಯರಿಗೆ ಚಾಲನ ಪರವಾನಗಿ ಅಲ್ಲ, ಬೈಕ್ ಕೂಡಾ ಕೈಗೆ ನೀಡಬಾರದೆಂಬುದು ಸುಪ್ರಿಂ ಕೋರ್ಟ್ ಆದೇಶ‌ ಇದೆ. ಈ ಆದೇಶ ಪಾಲಿಸದಿದ್ದಲ್ಲಿ ಪೋಷಕರಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಎಚ್ಚರಿಸಿದರು.

ನಗರದಲ್ಲಿ ಅಪ್ರಾಪ್ತರ ಬೈಕ್ ಸಂಚಾರಕ್ಕೆ ಕಡಿವಾಣ ಹಾಕಲು, 18 ವರ್ಷದೊಳಗಿನ ಮಕ್ಕಳು ಚಾಲಯಿಸುತ್ತಿದ್ದ ಬೈಕ್ ಗಳನ್ನು ತಡೆದು ಸಂಚಾರಿ ನಿಯಮಗಳನ್ನು ತಿಳಿಹೇಳುವ ಅಭಿಯಾನ ಕೈಗೊಂಡು ಮಾತನಾಡಿದ ಅವರು, ಅಪ್ರಾಪ್ತ ಬಾಲಕ, ಬಾಲಕಿಯರ ಕೈಗೆ ಬೈಕ್ ಸಿಕ್ಕರೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ‌ ಮನಸೋಇಚ್ಛೆ ಬೈಕ್ ಚಾಲಯಿಸಿ ಸಾರ್ವಜನಿಕ ಸಂಚಾರ ಅಸ್ತವ್ಯವಸ್ಥಗೊಳಿಸಿದ್ದಾರೆ. ಹೀಗಾಗಿ ಈ ವರ್ಗದ ಮಕ್ಕಳು ನಗರ ಸೇರಿದಂತೆ ಜಿಲ್ಲಾದ್ಯಂತ ಎರ‌್ರಾಬಿರ‌್ರಿ ಬೈಕ್‌ನಲ್ಲಿ ಸಂಚರಿಸುವ ಮೂಲಕ ರಸ್ತೆ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದೆಷ್ಟೋ ಮಕ್ಕಳು ಅರಳುವ ಮುನ್ನವೇ ಇಹಲೋಕ ತ್ಯಜಿಸುತ್ತಿರುವುದು ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ ಎಂದರು.

18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ಪಾಲಕರು ಮೊದಲು ನಿರಾಕರಿಸಬೇಕು. ಬೈಕ್ ಕೊಟ್ಟರೆ ಸಿನಿಮಾ ಸ್ಟ್ರೈಲ್‌ನಲ್ಲಿ ಬೈಕ್ ಓಡಿಸುವ ಮೂಲಕ ಅಪಘಾತ ಸೇರಿದಂತೆ ಇಲ್ಲದ ಆವಾಂತರಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಾರೆ. ಪೋಷಕರಿಗಿರುವ ಮರ್ಯಾದೆಯನ್ನು ರಸ್ತೆ ಪಾಲು ಮಾಡುತ್ತಾರೆ. ಅವರು ಮಾಡುವ ಅನಾಹುತಕ್ಕೆ ಪೋಷಕರೇ ಬೆಲೆ ತೆತ್ತಬೇಕಾಗುತ್ತದೆ ಎನ್ನುವದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಎಲ್ಲರ ಜೀವ ಅತ್ಯಮೂಲ್ಯ, ಆದ್ದರಿಂದ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಬೈಕ್ ಸವಾರರು ತಲೆಗೆ ಹೆಲ್ಮೆಟ್ ಧರಿಸಬೇಕು ಎಂದು ತಿಳಿಹೇಳಿದರು.

ಅಪ್ರಾಪ್ತರು ತಂದಿದ್ದ ಬೈಕ್ ಗಳನ್ನು ಸೀಜ್ ಮಾಡಿ ಪೋಷಕರನ್ನು ಠಾಣೆಗೆ ಬರಮಾಡಿಕೊಂಡು ಇನ್ನು‌ ಮುಂದೆ 18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

8 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

22 hours ago