ಶಾಲಾ, ಕಾಲೇಜಿನಲ್ಲಿ ಓದುತ್ತಿರುವ (18 ವರ್ಷದೊಳಗಿನವರು) ಬಾಲಕ, ಬಾಲಕಿಯರಿಗೆ ಚಾಲನ ಪರವಾನಗಿ ಅಲ್ಲ, ಬೈಕ್ ಕೂಡಾ ಕೈಗೆ ನೀಡಬಾರದೆಂಬುದು ಸುಪ್ರಿಂ ಕೋರ್ಟ್ ಆದೇಶ ಇದೆ. ಈ ಆದೇಶ ಪಾಲಿಸದಿದ್ದಲ್ಲಿ ಪೋಷಕರಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಎಚ್ಚರಿಸಿದರು.
ನಗರದಲ್ಲಿ ಅಪ್ರಾಪ್ತರ ಬೈಕ್ ಸಂಚಾರಕ್ಕೆ ಕಡಿವಾಣ ಹಾಕಲು, 18 ವರ್ಷದೊಳಗಿನ ಮಕ್ಕಳು ಚಾಲಯಿಸುತ್ತಿದ್ದ ಬೈಕ್ ಗಳನ್ನು ತಡೆದು ಸಂಚಾರಿ ನಿಯಮಗಳನ್ನು ತಿಳಿಹೇಳುವ ಅಭಿಯಾನ ಕೈಗೊಂಡು ಮಾತನಾಡಿದ ಅವರು, ಅಪ್ರಾಪ್ತ ಬಾಲಕ, ಬಾಲಕಿಯರ ಕೈಗೆ ಬೈಕ್ ಸಿಕ್ಕರೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಮನಸೋಇಚ್ಛೆ ಬೈಕ್ ಚಾಲಯಿಸಿ ಸಾರ್ವಜನಿಕ ಸಂಚಾರ ಅಸ್ತವ್ಯವಸ್ಥಗೊಳಿಸಿದ್ದಾರೆ. ಹೀಗಾಗಿ ಈ ವರ್ಗದ ಮಕ್ಕಳು ನಗರ ಸೇರಿದಂತೆ ಜಿಲ್ಲಾದ್ಯಂತ ಎರ್ರಾಬಿರ್ರಿ ಬೈಕ್ನಲ್ಲಿ ಸಂಚರಿಸುವ ಮೂಲಕ ರಸ್ತೆ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದೆಷ್ಟೋ ಮಕ್ಕಳು ಅರಳುವ ಮುನ್ನವೇ ಇಹಲೋಕ ತ್ಯಜಿಸುತ್ತಿರುವುದು ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ ಎಂದರು.
18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ಪಾಲಕರು ಮೊದಲು ನಿರಾಕರಿಸಬೇಕು. ಬೈಕ್ ಕೊಟ್ಟರೆ ಸಿನಿಮಾ ಸ್ಟ್ರೈಲ್ನಲ್ಲಿ ಬೈಕ್ ಓಡಿಸುವ ಮೂಲಕ ಅಪಘಾತ ಸೇರಿದಂತೆ ಇಲ್ಲದ ಆವಾಂತರಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಾರೆ. ಪೋಷಕರಿಗಿರುವ ಮರ್ಯಾದೆಯನ್ನು ರಸ್ತೆ ಪಾಲು ಮಾಡುತ್ತಾರೆ. ಅವರು ಮಾಡುವ ಅನಾಹುತಕ್ಕೆ ಪೋಷಕರೇ ಬೆಲೆ ತೆತ್ತಬೇಕಾಗುತ್ತದೆ ಎನ್ನುವದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲರ ಜೀವ ಅತ್ಯಮೂಲ್ಯ, ಆದ್ದರಿಂದ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಬೈಕ್ ಸವಾರರು ತಲೆಗೆ ಹೆಲ್ಮೆಟ್ ಧರಿಸಬೇಕು ಎಂದು ತಿಳಿಹೇಳಿದರು.
ಅಪ್ರಾಪ್ತರು ತಂದಿದ್ದ ಬೈಕ್ ಗಳನ್ನು ಸೀಜ್ ಮಾಡಿ ಪೋಷಕರನ್ನು ಠಾಣೆಗೆ ಬರಮಾಡಿಕೊಂಡು ಇನ್ನು ಮುಂದೆ 18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…