ಶಾಲಾ, ಕಾಲೇಜಿನಲ್ಲಿ ಓದುತ್ತಿರುವ (18 ವರ್ಷದೊಳಗಿನವರು) ಬಾಲಕ, ಬಾಲಕಿಯರಿಗೆ ಚಾಲನ ಪರವಾನಗಿ ಅಲ್ಲ, ಬೈಕ್ ಕೂಡಾ ಕೈಗೆ ನೀಡಬಾರದೆಂಬುದು ಸುಪ್ರಿಂ ಕೋರ್ಟ್ ಆದೇಶ ಇದೆ. ಈ ಆದೇಶ ಪಾಲಿಸದಿದ್ದಲ್ಲಿ ಪೋಷಕರಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಎಚ್ಚರಿಸಿದರು.
ನಗರದಲ್ಲಿ ಅಪ್ರಾಪ್ತರ ಬೈಕ್ ಸಂಚಾರಕ್ಕೆ ಕಡಿವಾಣ ಹಾಕಲು, 18 ವರ್ಷದೊಳಗಿನ ಮಕ್ಕಳು ಚಾಲಯಿಸುತ್ತಿದ್ದ ಬೈಕ್ ಗಳನ್ನು ತಡೆದು ಸಂಚಾರಿ ನಿಯಮಗಳನ್ನು ತಿಳಿಹೇಳುವ ಅಭಿಯಾನ ಕೈಗೊಂಡು ಮಾತನಾಡಿದ ಅವರು, ಅಪ್ರಾಪ್ತ ಬಾಲಕ, ಬಾಲಕಿಯರ ಕೈಗೆ ಬೈಕ್ ಸಿಕ್ಕರೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಮನಸೋಇಚ್ಛೆ ಬೈಕ್ ಚಾಲಯಿಸಿ ಸಾರ್ವಜನಿಕ ಸಂಚಾರ ಅಸ್ತವ್ಯವಸ್ಥಗೊಳಿಸಿದ್ದಾರೆ. ಹೀಗಾಗಿ ಈ ವರ್ಗದ ಮಕ್ಕಳು ನಗರ ಸೇರಿದಂತೆ ಜಿಲ್ಲಾದ್ಯಂತ ಎರ್ರಾಬಿರ್ರಿ ಬೈಕ್ನಲ್ಲಿ ಸಂಚರಿಸುವ ಮೂಲಕ ರಸ್ತೆ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದೆಷ್ಟೋ ಮಕ್ಕಳು ಅರಳುವ ಮುನ್ನವೇ ಇಹಲೋಕ ತ್ಯಜಿಸುತ್ತಿರುವುದು ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ ಎಂದರು.
18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ಪಾಲಕರು ಮೊದಲು ನಿರಾಕರಿಸಬೇಕು. ಬೈಕ್ ಕೊಟ್ಟರೆ ಸಿನಿಮಾ ಸ್ಟ್ರೈಲ್ನಲ್ಲಿ ಬೈಕ್ ಓಡಿಸುವ ಮೂಲಕ ಅಪಘಾತ ಸೇರಿದಂತೆ ಇಲ್ಲದ ಆವಾಂತರಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಾರೆ. ಪೋಷಕರಿಗಿರುವ ಮರ್ಯಾದೆಯನ್ನು ರಸ್ತೆ ಪಾಲು ಮಾಡುತ್ತಾರೆ. ಅವರು ಮಾಡುವ ಅನಾಹುತಕ್ಕೆ ಪೋಷಕರೇ ಬೆಲೆ ತೆತ್ತಬೇಕಾಗುತ್ತದೆ ಎನ್ನುವದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಎಲ್ಲರ ಜೀವ ಅತ್ಯಮೂಲ್ಯ, ಆದ್ದರಿಂದ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಬೈಕ್ ಸವಾರರು ತಲೆಗೆ ಹೆಲ್ಮೆಟ್ ಧರಿಸಬೇಕು ಎಂದು ತಿಳಿಹೇಳಿದರು.
ಅಪ್ರಾಪ್ತರು ತಂದಿದ್ದ ಬೈಕ್ ಗಳನ್ನು ಸೀಜ್ ಮಾಡಿ ಪೋಷಕರನ್ನು ಠಾಣೆಗೆ ಬರಮಾಡಿಕೊಂಡು ಇನ್ನು ಮುಂದೆ 18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…