18 ವರ್ಷದೊಳಗಿನ ಮಕ್ಕಳ ಬೈಕ್ ಸಂಚಾರಕ್ಕೆ ಬ್ರೇಕ್:  ಅಪ್ರಾಪ್ತರಿಗೆ ಬೈಕ್ ಕೊಟ್ಟರೆ ಪಾಲಕರಿಗೆ ಬೀಳುತ್ತೆ ದಂಡ ಅಥವಾ ಜೈಲು ಶಿಕ್ಷೆ…ಹುಷಾರ್…!

ಶಾಲಾ, ಕಾಲೇಜಿನಲ್ಲಿ ಓದುತ್ತಿರುವ (18 ವರ್ಷದೊಳಗಿನವರು) ಬಾಲಕ, ಬಾಲಕಿಯರಿಗೆ ಚಾಲನ ಪರವಾನಗಿ ಅಲ್ಲ, ಬೈಕ್ ಕೂಡಾ ಕೈಗೆ ನೀಡಬಾರದೆಂಬುದು ಸುಪ್ರಿಂ ಕೋರ್ಟ್ ಆದೇಶ‌ ಇದೆ. ಈ ಆದೇಶ ಪಾಲಿಸದಿದ್ದಲ್ಲಿ ಪೋಷಕರಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಎಚ್ಚರಿಸಿದರು.

ನಗರದಲ್ಲಿ ಅಪ್ರಾಪ್ತರ ಬೈಕ್ ಸಂಚಾರಕ್ಕೆ ಕಡಿವಾಣ ಹಾಕಲು, 18 ವರ್ಷದೊಳಗಿನ ಮಕ್ಕಳು ಚಾಲಯಿಸುತ್ತಿದ್ದ ಬೈಕ್ ಗಳನ್ನು ತಡೆದು ಸಂಚಾರಿ ನಿಯಮಗಳನ್ನು ತಿಳಿಹೇಳುವ ಅಭಿಯಾನ ಕೈಗೊಂಡು ಮಾತನಾಡಿದ ಅವರು, ಅಪ್ರಾಪ್ತ ಬಾಲಕ, ಬಾಲಕಿಯರ ಕೈಗೆ ಬೈಕ್ ಸಿಕ್ಕರೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ‌ ಮನಸೋಇಚ್ಛೆ ಬೈಕ್ ಚಾಲಯಿಸಿ ಸಾರ್ವಜನಿಕ ಸಂಚಾರ ಅಸ್ತವ್ಯವಸ್ಥಗೊಳಿಸಿದ್ದಾರೆ. ಹೀಗಾಗಿ ಈ ವರ್ಗದ ಮಕ್ಕಳು ನಗರ ಸೇರಿದಂತೆ ಜಿಲ್ಲಾದ್ಯಂತ ಎರ‌್ರಾಬಿರ‌್ರಿ ಬೈಕ್‌ನಲ್ಲಿ ಸಂಚರಿಸುವ ಮೂಲಕ ರಸ್ತೆ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಅದೆಷ್ಟೋ ಮಕ್ಕಳು ಅರಳುವ ಮುನ್ನವೇ ಇಹಲೋಕ ತ್ಯಜಿಸುತ್ತಿರುವುದು ಪ್ರಜ್ಞಾವಂತರ ಆತಂಕಕ್ಕೆ ಕಾರಣವಾಗಿದೆ ಎಂದರು.

18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ಪಾಲಕರು ಮೊದಲು ನಿರಾಕರಿಸಬೇಕು. ಬೈಕ್ ಕೊಟ್ಟರೆ ಸಿನಿಮಾ ಸ್ಟ್ರೈಲ್‌ನಲ್ಲಿ ಬೈಕ್ ಓಡಿಸುವ ಮೂಲಕ ಅಪಘಾತ ಸೇರಿದಂತೆ ಇಲ್ಲದ ಆವಾಂತರಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಾರೆ. ಪೋಷಕರಿಗಿರುವ ಮರ್ಯಾದೆಯನ್ನು ರಸ್ತೆ ಪಾಲು ಮಾಡುತ್ತಾರೆ. ಅವರು ಮಾಡುವ ಅನಾಹುತಕ್ಕೆ ಪೋಷಕರೇ ಬೆಲೆ ತೆತ್ತಬೇಕಾಗುತ್ತದೆ ಎನ್ನುವದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಎಲ್ಲರ ಜೀವ ಅತ್ಯಮೂಲ್ಯ, ಆದ್ದರಿಂದ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಬೈಕ್ ಸವಾರರು ತಲೆಗೆ ಹೆಲ್ಮೆಟ್ ಧರಿಸಬೇಕು ಎಂದು ತಿಳಿಹೇಳಿದರು.

ಅಪ್ರಾಪ್ತರು ತಂದಿದ್ದ ಬೈಕ್ ಗಳನ್ನು ಸೀಜ್ ಮಾಡಿ ಪೋಷಕರನ್ನು ಠಾಣೆಗೆ ಬರಮಾಡಿಕೊಂಡು ಇನ್ನು‌ ಮುಂದೆ 18 ವರ್ಷ ಪೂರೈಸದ ಬಾಲಕ, ಬಾಲಕಿ ಕೈಗೆ ಬೈಕ್ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

6 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

16 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago