ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು.
ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ ಶಿಕ್ಷಕ ರಾಮಚಂದ್ರಯ್ಯ ಸಹಾಯಕ ಚುನಾವಣಾಧಿಕಾರಿಯಾಗಿ,
ಶಿಕ್ಷಕರುಗಳಾ ಎಂ.ಬಸವರಾಜು, ಬಿ.ಸುಶೀಲ, ಪಿ.ಎನ್.ಸ್ವಾತಿ, ಡಿ.ಎಂ.ಮೋಹನ್ ಕುಮಾರ್, ಎಂ.ಸಿ.ಗಿರಿರಂಗಯ್ಯ ಮತ್ತು ಕೆ.ಎನ್.ಸಂತೋಷ. ತರಗತಿಯ ಚುನಾವಣಾ ಅಧಿಕಾಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಮತದಾನ ಮಾಡುವ ಮೂಲಕ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಚುನಾವಣೆಯಲ್ಲಿ 10ನೇ ತರಗತಿಗೆ ಭವಿಷ್ ಗೌಡ, ಎನ್.ನಿಶಾಂಕ್, ಮೋನಿಶಾ, ಜಾಹ್ನವಿ, 9ನೇ ತರಗತಿ ಎ.ವಿಭಾಗಕ್ಕೆ ಅಜಯ್ ಕುಮಾರ್, ಸಿ.ಎ.ಅಂಕಿತ್ ಕುಮಾರ್,
ಟಿ.ಎ.ಅಮಿತಾ, ಎಸ್.ಬಿ.ತ್ರಿಶಾ ಮತ್ತು 9ನೇ ತರಗತಿ ಬಿ ವಿಭಾಗಕ್ಕೆ ಎಚ್.ಭುವನ್ ಗೌಡ, ಎನ್.ಅಪೂರ್ವ, 8ನೇ ತರಗತಿ ಎ ವಿಭಾಗಕ್ಕೆ ಎಸ್.ನಿತಿನ್ ಕುಮಾರ್, ಸಿ.ಜಿ.ಲಕ್ಷ್ಮಿ, 8 ನೇ ತರಗತಿ ಬಿ ವಿಭಾಗಕ್ಕೆ ಅಭಿಲಾಷ್, ಸಿ.ವಿ.ಬಿಂದು ಆಯ್ಕೆಯಾಗಿದ್ದಾರೆ.
ಶಾಲಾ ಯುವ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಯವರು, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿಕುಮಾರ್ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…