ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು.
ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ ಮುಖ್ಯ ಚುನಾವಣಾಧಿಕಾರಿಯಾಗಿ, ಸಮಾಜ ವಿಜ್ಞಾನ ಶಿಕ್ಷಕ ರಾಮಚಂದ್ರಯ್ಯ ಸಹಾಯಕ ಚುನಾವಣಾಧಿಕಾರಿಯಾಗಿ,
ಶಿಕ್ಷಕರುಗಳಾ ಎಂ.ಬಸವರಾಜು, ಬಿ.ಸುಶೀಲ, ಪಿ.ಎನ್.ಸ್ವಾತಿ, ಡಿ.ಎಂ.ಮೋಹನ್ ಕುಮಾರ್, ಎಂ.ಸಿ.ಗಿರಿರಂಗಯ್ಯ ಮತ್ತು ಕೆ.ಎನ್.ಸಂತೋಷ. ತರಗತಿಯ ಚುನಾವಣಾ ಅಧಿಕಾಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳು ಮತದಾನ ಮಾಡುವ ಮೂಲಕ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು.
ಚುನಾವಣೆಯಲ್ಲಿ 10ನೇ ತರಗತಿಗೆ ಭವಿಷ್ ಗೌಡ, ಎನ್.ನಿಶಾಂಕ್, ಮೋನಿಶಾ, ಜಾಹ್ನವಿ, 9ನೇ ತರಗತಿ ಎ.ವಿಭಾಗಕ್ಕೆ ಅಜಯ್ ಕುಮಾರ್, ಸಿ.ಎ.ಅಂಕಿತ್ ಕುಮಾರ್,
ಟಿ.ಎ.ಅಮಿತಾ, ಎಸ್.ಬಿ.ತ್ರಿಶಾ ಮತ್ತು 9ನೇ ತರಗತಿ ಬಿ ವಿಭಾಗಕ್ಕೆ ಎಚ್.ಭುವನ್ ಗೌಡ, ಎನ್.ಅಪೂರ್ವ, 8ನೇ ತರಗತಿ ಎ ವಿಭಾಗಕ್ಕೆ ಎಸ್.ನಿತಿನ್ ಕುಮಾರ್, ಸಿ.ಜಿ.ಲಕ್ಷ್ಮಿ, 8 ನೇ ತರಗತಿ ಬಿ ವಿಭಾಗಕ್ಕೆ ಅಭಿಲಾಷ್, ಸಿ.ವಿ.ಬಿಂದು ಆಯ್ಕೆಯಾಗಿದ್ದಾರೆ.
ಶಾಲಾ ಯುವ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಯವರು, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿಕುಮಾರ್ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…