ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.
ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.
ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.
ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.
ಶಾಲೆಗೆ ಭೇಟಿ ನೀಡಿದರೇ.. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.
ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.
ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…