ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

2 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

3 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

16 hours ago