ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

6 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

6 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

10 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

12 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

15 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

19 hours ago