ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

46 minutes ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

4 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

4 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

8 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

8 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

10 hours ago