ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.
ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.
ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.
ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.
ಶಾಲೆಗೆ ಭೇಟಿ ನೀಡಿದರೇ.. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.
ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.
ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…
ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…
ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…
ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…