ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

6 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

16 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago