ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರನ್ನು ತ್ವರಿತವಾಗಿ ನೇಮಿಸಬೇಕು- ನಗರಸಭೆ ಸದಸ್ಯ ವಡ್ಡರಹಳ್ಳಿ ರವಿ ಆಗ್ರಹ

ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಸೂಕ್ತ ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳ ಕಲಿಕಾ ಚಟುವಟಿಕೆ ಕುಂಠಿತವಾಗುತ್ತಿದೆ.

ನಗರದ ಭಗತ್ ಸಿಂಗ್ ಕ್ರೀಡಾಂಗಣದ ಬಳಿಯಿರುವ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಈ ವರ್ಷ 635 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗೆ ಮಂಜೂರಾದ ಬೋಧಕ ಮತ್ತು ಬೋಧಕೇತರ ಒಟ್ಟು ಹುದ್ದೆಗಳು 40. ಆದರೆ, ಕರ್ತವ್ಯ ನಿರ್ವಹಿಸುತ್ತಿರುವವರು 22. ಖಾಲಿ ಹುದ್ದೆಗಳು 18. ಅಂದರೆ ಸುಮಾರು ಅರ್ಧಕ್ಕರ್ಧ ಹುದ್ದೆಗಳು ಖಾಲಿ ಹುದ್ದೆಗಳಿವೆ. ಅಲ್ಲದೆ ಈ ಶಾಲೆಯಲ್ಲಿ 7 ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ.

ಇಷ್ಟು ಖಾಲಿ ಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯಕ್ಕೆ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಈ ಕುರಿತು ಮಾತನಾಡಿರುವ ವಡ್ಡರಹಳ್ಳಿ ರವಿಕುಮಾರ್ ಅವರು, ಇತಿಹಾಸ ಹೊಂದಿರುವ ಸರ್ಕಾರಿ ಪ್ರೌಢಶಾಲೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಅನುಮಾನ ಕಾಡುತ್ತಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ.

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಶಿಕ್ಷಕರನ್ನು ತ್ವರಿತವಾಗಿ ನೇಮಿಸುವುದು, ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ ಇಂಗ್ಲೀಷ್ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜಿಸಿರುವುದನ್ನು ರದ್ದುಗೊಳಿಸಿ, ಮತ್ತೆ ಇದೇ ಶಾಲೆಗೆ ಕರೆಸಲು ಕ್ರಮಕೈಗೊಳ್ಳದೆ ಇದ್ದರೆ ಸಮಾನ ಮನಸ್ಕರು, ಪೋಷಕರೊಂದಿಗೆ ತೀವ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

11 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

17 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

23 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago