ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ಹಳೇ ಪಿಂಚಣಿ ಯೋಜನೆ ಮತ್ತು ನಗದು ರಹಿತ ವೈದ್ಯಕೀಯ ಸೇವೆ ಜಾರಿಗಾಗಿ ಮನವಿ

ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ಹಳೇ ಪಿಂಚಣಿ ಯೋಜನೆ ಮತ್ತು ನಗದು ರಹಿತ ವೈದ್ಯಕೀಯ ಸೇವೆ ಜಾರಿಗೆ ಒತ್ತಾಯಿಸಿ  ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ಸಂಘ ಮತ್ತು ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಶಾಸಕ‌ ಧೀರಜ್ ಮುನಿರಾಜು ಅವರಿಗೆ, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ  ಮನವಿ ಸಲ್ಲಿಸಿದರು.

ಮನವಿ ಸಲ್ಲಿಸುವ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು,  ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಾಗಿದೆ. ಹಿಂದಿನ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿದ ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ ಮತ್ತು ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.‌

ಪ್ರಸ್ತುತ 7ನೇ ವೇತನ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹಿಂದಿನ‌ ವೇತನ ಆಯೋಗಗಳ ವರದಿಗಳು ನೀಡಿದ ಸಮಯಕ್ಕೆ ಪ್ರಸ್ತುತ ವೇತನ ಆಯೋಗ ನೀಡಿದ ವರದಿಯ ಸಮಯ ಸಾಕಷ್ಟು ವಿಳಂಬವಾಗಿದೆ.‌  2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿಯನ್ನು ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು.

ಪ್ರಸ್ತುತ ಆರು ತಿಂಗಳೊಳಗೆ ವರದಿ ‍ಪಡೆಯದ ರಾಜ್ಯ  ಸರ್ಕಾರ ಆಯೋಗವನ್ನು ಎರಡು ಸಲ ಆರು ತಿಂಗಳ ಅವಧಿಗೆ ವಿಸ್ತರಿಸಿತು. ವೇತನ ಆಯೋಗ ರಚನೆಯಾಗಿ 19 ತಿಂಗಳು ಕಳೆದಿದೆ. ಕರ್ನಾಟಕ ರಾಜ್ಯ ನೌಕರರ ಸ‌ಮ್ಮೇಳನದದಲ್ಲಿ ಮುಖ್ಯಮಂತ್ರಿ ನೀಡಿದ್ದ ವರದಿ ಅನುಷ್ಠಾನದ ಭರವಸೆ ಇನ್ನೂ ಈಡೇರಿಲ್ಲ. ರಾಜ್ಯ ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿಯನ್ನು  ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

7ನೇ ವೇತನ ಆಯೋಗದ ವರದಿ ಜಾರಿ ಜೊತೆಗೆ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.

ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಯ್ಯ, ಕಾರ್ಯದರ್ಶಿ ಶ್ರೀನಿವಾಸ, ದೊಡ್ಡಬಳ್ಳಾಪುರ ತಾಲ್ಲೂಕು ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಹಾಜರಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

4 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

4 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

5 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

7 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

10 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

13 hours ago