ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ಹಳೇ ಪಿಂಚಣಿ ಯೋಜನೆ ಮತ್ತು ನಗದು ರಹಿತ ವೈದ್ಯಕೀಯ ಸೇವೆ ಜಾರಿಗಾಗಿ ಮನವಿ

ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿ, ಹಳೇ ಪಿಂಚಣಿ ಯೋಜನೆ ಮತ್ತು ನಗದು ರಹಿತ ವೈದ್ಯಕೀಯ ಸೇವೆ ಜಾರಿಗೆ ಒತ್ತಾಯಿಸಿ  ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ಸಂಘ ಮತ್ತು ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಶಾಸಕ‌ ಧೀರಜ್ ಮುನಿರಾಜು ಅವರಿಗೆ, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ  ಮನವಿ ಸಲ್ಲಿಸಿದರು.

ಮನವಿ ಸಲ್ಲಿಸುವ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು,  ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಾಗಿದೆ. ಹಿಂದಿನ ಸರ್ಕಾರ ನಿವೃತ್ತ ಮುಖ್ಯ ಕಾರ್ಯದರ್ಶಿದ ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿ ಮತ್ತು ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.‌

ಪ್ರಸ್ತುತ 7ನೇ ವೇತನ ಆಯೋಗವು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಹಿಂದಿನ‌ ವೇತನ ಆಯೋಗಗಳ ವರದಿಗಳು ನೀಡಿದ ಸಮಯಕ್ಕೆ ಪ್ರಸ್ತುತ ವೇತನ ಆಯೋಗ ನೀಡಿದ ವರದಿಯ ಸಮಯ ಸಾಕಷ್ಟು ವಿಳಂಬವಾಗಿದೆ.‌  2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿಯನ್ನು ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು.

ಪ್ರಸ್ತುತ ಆರು ತಿಂಗಳೊಳಗೆ ವರದಿ ‍ಪಡೆಯದ ರಾಜ್ಯ  ಸರ್ಕಾರ ಆಯೋಗವನ್ನು ಎರಡು ಸಲ ಆರು ತಿಂಗಳ ಅವಧಿಗೆ ವಿಸ್ತರಿಸಿತು. ವೇತನ ಆಯೋಗ ರಚನೆಯಾಗಿ 19 ತಿಂಗಳು ಕಳೆದಿದೆ. ಕರ್ನಾಟಕ ರಾಜ್ಯ ನೌಕರರ ಸ‌ಮ್ಮೇಳನದದಲ್ಲಿ ಮುಖ್ಯಮಂತ್ರಿ ನೀಡಿದ್ದ ವರದಿ ಅನುಷ್ಠಾನದ ಭರವಸೆ ಇನ್ನೂ ಈಡೇರಿಲ್ಲ. ರಾಜ್ಯ ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿಯನ್ನು  ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

7ನೇ ವೇತನ ಆಯೋಗದ ವರದಿ ಜಾರಿ ಜೊತೆಗೆ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.

ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹಯ್ಯ, ಕಾರ್ಯದರ್ಶಿ ಶ್ರೀನಿವಾಸ, ದೊಡ್ಡಬಳ್ಳಾಪುರ ತಾಲ್ಲೂಕು ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಹಾಜರಿದ್ದರು.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

51 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

10 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

20 hours ago