195 ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಣೆ: ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿದೆ.

161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂನ್ 8ರಂದು ಪ್ರವೇಶಿಸಿ, ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು, ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ.73ರಷ್ಟು ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ.

ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago