ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿದೆ.
2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂನ್ 8ರಂದು ಪ್ರವೇಶಿಸಿ, ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು, ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ.73ರಷ್ಟು ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ.
ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…