ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿದೆ.
2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂನ್ 8ರಂದು ಪ್ರವೇಶಿಸಿ, ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು, ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ.73ರಷ್ಟು ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ.
ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…