ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿದೆ.
2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂನ್ 8ರಂದು ಪ್ರವೇಶಿಸಿ, ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು, ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ.73ರಷ್ಟು ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ.
ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…