195 ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಣೆ: ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿದೆ.

161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.

2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ಜೂನ್ 8ರಂದು ಪ್ರವೇಶಿಸಿ, ರಾಜ್ಯದ ಎಲ್ಲೆಡೆ 14 ದಿನಗಳಲ್ಲಿ ವ್ಯಾಪಿಸಿತು. ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು, ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ತಿಂಗಳಲ್ಲಿ ವಾಡಿಕೆಗಿಂತ ಶೇ.73ರಷ್ಟು ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ.

ರಾಜ್ಯದ ಮಳೆ, ಬೆಳೆ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

4 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

9 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago