ತಾಳಿ ಕಟ್ಟಿದ ಹೆಂಡತಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಪತಿರಾಯ. ಈ ಘಟನೆ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ನಡೆದಿದೆ.
ಶಿಲ್ಪ ಸೀತಮ್ಮ(40)ಮೃತಪಟ್ಟ ದುರ್ದೈವಿ. ಆಕೆಯ ಪತಿ ನಾಯಕಂಡ ಬೋಪಣ್ಣ (45) ಹತ್ಯೆ ಮಾಡಿದ ಅರೋಪಿಯಾಗಿದ್ದಾನೆ.
ನಿನ್ನೆ ರಾತ್ರಿ ಶಿಲ್ಪ ಬೇರೊಬ್ಬರ ದೂರವಾಣಿ ಕರೆ ಸ್ವೀಕರಿಸಿ ಮಾತನಾಡಿದ್ದನ್ನು ಆಕ್ಷೇಪಿಸಿದ ನಂತರ ಈ ವಿಚಾರವಾಗಿ ಜಗಳ ನಡೆದು ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಶಿಲ್ಪ ಸೀತಮ್ಮ 2012 ರಿಂದ 2017 ರವರೆಗೆ ಬೇಟೋಳಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆಸಲ್ಲಿಸಿದ್ದರು. ಕೊಲೆ ನಡೆಸಿದ ನಂತರ ಬೋಪಣ್ಣ ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…