1997-2000ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ

ಕಳೆದ ಬಾಲ್ಯ, ಕಲಿತ ಶಾಲೆ, ವಿದ್ಯೆ ನೀಡಿದ ಗುರುಗಳು, ಆಟ-ಪಾಠಗಳಲ್ಲಿ ಒಂದಾಗಿದ್ದ ಸಹಪಾಠಿಗಳ ಸುಮಧುರ ನೆನಪುಗಳ ಸಮಾಗಮ ಎಂತಹವರಿಗೂ ಖುಷಿ ನೀಡುತ್ತದೆ.

ಅಂತಹ ಒಂದು ಸುಮಧುರ ಘಳಿಗೆಗೆ ತಾಲೂಕಿನ ಮಾರುತಿ ಪ್ರೌಢ ಶಾಲೆ ಸಾಕ್ಷಿಯಾಯಿತು. 1997-2000 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಳೆಯ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲಕು ಹಾಕುತ್ತಾ, ಕಲಿಸಿದ ಗುರುಗಳಿಗೆ ವಂದನೆ ಸಲ್ಲಿಸಿದ್ದು ಅವಿಸ್ಮರಣೀಯ ಕ್ಷಣಗಳಲ್ಲೊಂದಾಗಿತ್ತು, ಕಲಿಸಿದ ಗುರುಗಳಲ್ಲಿ ಸಾರ್ಥಕತೆಯ ಭಾವ ಮನೆ ಮಾಡಿದರೆ ವಿದ್ಯಾರ್ಥಿಗಳ ಕಣ್ಣಲ್ಲಿ ಕೃತಜ್ಞತಾ ಭಾವ ಕಂಗೊಳಿಸಿತು.

ಹಳೆ ವಿದ್ಯಾರ್ಥಿ ರಮೇಶ್ ಆರ್ ಸಿ ಮಾತನಾಡಿ, ವಿದ್ಯಾರ್ಥಿ ಜೀವನವೆಂಬುದು ಬೆಲೆ ಕಟ್ಟಲಾಗದ್ದು, ಪ್ರತಿ ವ್ಯಕ್ತಿಯ ಜೀವನದಲ್ಲಿ ಗುರುವಿನ ಪಾತ್ರ ಅಪಾರವಾಗಿರುತ್ತದೆ, ಅದಕ್ಕಾಗಿಯೇ ವಿದ್ಯಾರ್ಥಿ ಹಂತದ ಜೀವನ ಬಂಗಾರದ ಜೀವನ ಎಂದು ಕರೆಯಲ್ಪಡಲಾಗುತ್ತದೆ ಎಂದರು.

ಶಾಲಾ ಕಾರ್ಯದರ್ಶಿ ಮುರಳಿ ಮೋಹನ್ ಮಾತನಾಡಿ, ಶಿಕ್ಷಣ ಪಡೆದ ಶಾಲೆ ಹಾಗೂ ಶಿಕ್ಷಣ ನೀಡಿದ ಗುರುವಿಗೆ ಬೆಲೆಕೊಟ್ಟ ನಿಮ್ಮ ಔದಾರ್ಯ ಇತರರಿಗೆ ಪ್ರೇರಣಾದಾಯಕ ಎಂದು ಹೇಳಿದರು.

ಕಾಂತರಾಜು, ನಾಗೇಶ್, ಹೇಮರಾಜ್, ಕೋಮಲ, ಪ್ರತಿಭಾ, ರಾಜೇಶ್ವರಿ, ವೆಂಕಟೇಶ್, ನಿವೃತ್ತ ಶಿಕ್ಷಕರಾದ ವೆಂಕಟ ರಾಮನ ಗುಪ್ತ, ಅಧಿ ಶೇಷಪ್ಪ, ಎನ್ ಮುನಿರಾಜು, ಸಿ ಕೃಷ್ಣಪ್ಪ, ಮುಖ್ಯ ಶಿಕ್ಷಕ ವೈ ವಿ ಕೃಷ್ಣ ಮೂರ್ತಿ, ಕೆ ವೆಂಕಟ ರಾಮನ ಇನ್ನು ಮುಂತಾದವರು ಭಾಗವಹಿಸಿದ್ದರು,

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

1 hour ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

2 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

4 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

8 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

13 hours ago