ಕಳೆದ ಬಾಲ್ಯ, ಕಲಿತ ಶಾಲೆ, ವಿದ್ಯೆ ನೀಡಿದ ಗುರುಗಳು, ಆಟ-ಪಾಠಗಳಲ್ಲಿ ಒಂದಾಗಿದ್ದ ಸಹಪಾಠಿಗಳ ಸುಮಧುರ ನೆನಪುಗಳ ಸಮಾಗಮ ಎಂತಹವರಿಗೂ ಖುಷಿ ನೀಡುತ್ತದೆ.
ಅಂತಹ ಒಂದು ಸುಮಧುರ ಘಳಿಗೆಗೆ ತಾಲೂಕಿನ ಮಾರುತಿ ಪ್ರೌಢ ಶಾಲೆ ಸಾಕ್ಷಿಯಾಯಿತು. 1997-2000 ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಳೆಯ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲಕು ಹಾಕುತ್ತಾ, ಕಲಿಸಿದ ಗುರುಗಳಿಗೆ ವಂದನೆ ಸಲ್ಲಿಸಿದ್ದು ಅವಿಸ್ಮರಣೀಯ ಕ್ಷಣಗಳಲ್ಲೊಂದಾಗಿತ್ತು, ಕಲಿಸಿದ ಗುರುಗಳಲ್ಲಿ ಸಾರ್ಥಕತೆಯ ಭಾವ ಮನೆ ಮಾಡಿದರೆ ವಿದ್ಯಾರ್ಥಿಗಳ ಕಣ್ಣಲ್ಲಿ ಕೃತಜ್ಞತಾ ಭಾವ ಕಂಗೊಳಿಸಿತು.
ಹಳೆ ವಿದ್ಯಾರ್ಥಿ ರಮೇಶ್ ಆರ್ ಸಿ ಮಾತನಾಡಿ, ವಿದ್ಯಾರ್ಥಿ ಜೀವನವೆಂಬುದು ಬೆಲೆ ಕಟ್ಟಲಾಗದ್ದು, ಪ್ರತಿ ವ್ಯಕ್ತಿಯ ಜೀವನದಲ್ಲಿ ಗುರುವಿನ ಪಾತ್ರ ಅಪಾರವಾಗಿರುತ್ತದೆ, ಅದಕ್ಕಾಗಿಯೇ ವಿದ್ಯಾರ್ಥಿ ಹಂತದ ಜೀವನ ಬಂಗಾರದ ಜೀವನ ಎಂದು ಕರೆಯಲ್ಪಡಲಾಗುತ್ತದೆ ಎಂದರು.
ಶಾಲಾ ಕಾರ್ಯದರ್ಶಿ ಮುರಳಿ ಮೋಹನ್ ಮಾತನಾಡಿ, ಶಿಕ್ಷಣ ಪಡೆದ ಶಾಲೆ ಹಾಗೂ ಶಿಕ್ಷಣ ನೀಡಿದ ಗುರುವಿಗೆ ಬೆಲೆಕೊಟ್ಟ ನಿಮ್ಮ ಔದಾರ್ಯ ಇತರರಿಗೆ ಪ್ರೇರಣಾದಾಯಕ ಎಂದು ಹೇಳಿದರು.
ಕಾಂತರಾಜು, ನಾಗೇಶ್, ಹೇಮರಾಜ್, ಕೋಮಲ, ಪ್ರತಿಭಾ, ರಾಜೇಶ್ವರಿ, ವೆಂಕಟೇಶ್, ನಿವೃತ್ತ ಶಿಕ್ಷಕರಾದ ವೆಂಕಟ ರಾಮನ ಗುಪ್ತ, ಅಧಿ ಶೇಷಪ್ಪ, ಎನ್ ಮುನಿರಾಜು, ಸಿ ಕೃಷ್ಣಪ್ಪ, ಮುಖ್ಯ ಶಿಕ್ಷಕ ವೈ ವಿ ಕೃಷ್ಣ ಮೂರ್ತಿ, ಕೆ ವೆಂಕಟ ರಾಮನ ಇನ್ನು ಮುಂತಾದವರು ಭಾಗವಹಿಸಿದ್ದರು,
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…