1997-2000ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ

ಕಳೆದ ಬಾಲ್ಯ, ಕಲಿತ ಶಾಲೆ, ವಿದ್ಯೆ ನೀಡಿದ ಗುರುಗಳು, ಆಟ-ಪಾಠಗಳಲ್ಲಿ ಒಂದಾಗಿದ್ದ ಸಹಪಾಠಿಗಳ ಸುಮಧುರ ನೆನಪುಗಳ ಸಮಾಗಮ ಎಂತಹವರಿಗೂ ಖುಷಿ ನೀಡುತ್ತದೆ.

ಅಂತಹ ಒಂದು ಸುಮಧುರ ಘಳಿಗೆಗೆ ತಾಲೂಕಿನ ಮಾರುತಿ ಪ್ರೌಢ ಶಾಲೆ ಸಾಕ್ಷಿಯಾಯಿತು. 1997-2000 ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಸಮಾಗಮ ಹಾಗೂ ಗುರುವಂದನೆ ಕಾರ್ಯಕ್ರಮ ಜರುಗಿತು. ಹಳೆಯ ವಿದ್ಯಾರ್ಥಿಗಳೆಲ್ಲ ಒಂದೆಡೆ ಸೇರಿ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲಕು ಹಾಕುತ್ತಾ, ಕಲಿಸಿದ ಗುರುಗಳಿಗೆ ವಂದನೆ ಸಲ್ಲಿಸಿದ್ದು ಅವಿಸ್ಮರಣೀಯ ಕ್ಷಣಗಳಲ್ಲೊಂದಾಗಿತ್ತು, ಕಲಿಸಿದ ಗುರುಗಳಲ್ಲಿ ಸಾರ್ಥಕತೆಯ ಭಾವ ಮನೆ ಮಾಡಿದರೆ ವಿದ್ಯಾರ್ಥಿಗಳ ಕಣ್ಣಲ್ಲಿ ಕೃತಜ್ಞತಾ ಭಾವ ಕಂಗೊಳಿಸಿತು.

ಹಳೆ ವಿದ್ಯಾರ್ಥಿ ರಮೇಶ್ ಆರ್ ಸಿ ಮಾತನಾಡಿ, ವಿದ್ಯಾರ್ಥಿ ಜೀವನವೆಂಬುದು ಬೆಲೆ ಕಟ್ಟಲಾಗದ್ದು, ಪ್ರತಿ ವ್ಯಕ್ತಿಯ ಜೀವನದಲ್ಲಿ ಗುರುವಿನ ಪಾತ್ರ ಅಪಾರವಾಗಿರುತ್ತದೆ, ಅದಕ್ಕಾಗಿಯೇ ವಿದ್ಯಾರ್ಥಿ ಹಂತದ ಜೀವನ ಬಂಗಾರದ ಜೀವನ ಎಂದು ಕರೆಯಲ್ಪಡಲಾಗುತ್ತದೆ ಎಂದರು.

ಶಾಲಾ ಕಾರ್ಯದರ್ಶಿ ಮುರಳಿ ಮೋಹನ್ ಮಾತನಾಡಿ, ಶಿಕ್ಷಣ ಪಡೆದ ಶಾಲೆ ಹಾಗೂ ಶಿಕ್ಷಣ ನೀಡಿದ ಗುರುವಿಗೆ ಬೆಲೆಕೊಟ್ಟ ನಿಮ್ಮ ಔದಾರ್ಯ ಇತರರಿಗೆ ಪ್ರೇರಣಾದಾಯಕ ಎಂದು ಹೇಳಿದರು.

ಕಾಂತರಾಜು, ನಾಗೇಶ್, ಹೇಮರಾಜ್, ಕೋಮಲ, ಪ್ರತಿಭಾ, ರಾಜೇಶ್ವರಿ, ವೆಂಕಟೇಶ್, ನಿವೃತ್ತ ಶಿಕ್ಷಕರಾದ ವೆಂಕಟ ರಾಮನ ಗುಪ್ತ, ಅಧಿ ಶೇಷಪ್ಪ, ಎನ್ ಮುನಿರಾಜು, ಸಿ ಕೃಷ್ಣಪ್ಪ, ಮುಖ್ಯ ಶಿಕ್ಷಕ ವೈ ವಿ ಕೃಷ್ಣ ಮೂರ್ತಿ, ಕೆ ವೆಂಕಟ ರಾಮನ ಇನ್ನು ಮುಂತಾದವರು ಭಾಗವಹಿಸಿದ್ದರು,

Ramesh Babu

Journalist

Recent Posts

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

51 minutes ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

5 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

6 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

20 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago