ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ, ಮೇಳೇಕೋಟೆ ಗ್ರಾಮ ಪಂಚಾಯಿತಿ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2.17 ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಚಾಲನೆ ನೀಡಿದರು.
ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 161.98 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಸಿ.ಸಿ ರಸ್ತೆ, ಚರಂಡಿ, ಅಂಗನವಾಡಿ ದುರಸ್ಥಿ, ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.
ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 21 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಎನ್.ಆರ್.ಎಲ್.ಎಂ ಭವನದಲ್ಲಿ ವಿಶೇಷ ಚೇತನರ ಉಪಯೋಗಕ್ಕಾಗಿ ರ್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34.99 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಶುದ್ಧ ಕುಡಿಯುವ ನೀರು ಘಟಕ ಯಂತ್ರೋಪಕರಣ ಅಳವಡಿಕೆಗೆ ಚಾಲನೆ ನೀಡಿದರು.
*ಘಾಟಿ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ*
ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವತಿಯಿಂದ ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ಈ ವರ್ಷ ನಡೆದ ರಾಸುಗಳ ಜಾತ್ರೆಯಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳ ವಿಜೇತ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಬಹುಮಾನ ವಿತರಿಸಿ ಸನ್ಮಾನಿಸಿ ಮಾತನಾಡಿ ಒಕ್ಕಲು ಮಕ್ಕಳಾದ ನಾವು ಪಶು ಸಂಪತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಘಾಟಿ ಅಭಿವೃದ್ಧಿ ಪ್ರಾಧಿಕಾರ ಉತ್ತಮ ಕೆಲಸ ಮಾಡುತಿದ್ದು ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಬದ್ದನಾಗಿದ್ದು, ತಮ್ಮ ತಾತ ತಂದೆಯ ಕಾಲದಲ್ಲಿ ಜಾತ್ರೆಗೆ ಭಾಗವಹಿಸುತಿದ್ದುದನ್ನು ಸ್ಮರಿಸಿದರು.
ಹಾಲು ಹಲ್ಲಿನ ಹೋರಿಗಳಲ್ಲಿ ಪ್ರಥಮ ಬಹುಮಾನವಾಗಿ ಹೊಸಕೋಟೆ ತಾಲ್ಲೂಕಿನ ತರಬರಹಳ್ಳಿಯ ನಾರಾಯಣಸ್ವಾಮಿ, ಬಾಯಿ ಗೂಡಿದ ಜೋಡಿ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕು ಚೆನ್ನಹಳ್ಳಿ ಗ್ರಾಮದ ಮುನಿಯಪ್ಪ, ಹಾಲು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ಬೆಂ.ನಗರ ಜಿಲ್ಲೆಯ ಜಕ್ಕೂರಿನ ಜಶ್ವಂತ್, ಆರು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಆದರ್ಶ್, ನಾಲ್ಕು ಹಲ್ಲಿನ ಜೋಡಿ ಎತ್ತುಗಳಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮಾನೆ ನಾರಾಯಣಪ್ಪ, ಆರು ಹಲ್ಲಿನ ಹೋರಿಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗೆದ್ದಲಪಾಳ್ಯದ ಚಿಕ್ಕ ಮುನಿಯಪ್ಪ, ಎರಡು ಹಲ್ಲಿನ ಜೊತೆ ಎತ್ತುಗಳಲ್ಲಿ ದೇವನಹಳ್ಳಿ ಶ್ರೀನಿವಾಸ್ ಇವರುಗಳಿಗೆ ಪ್ರಥಮ ಬಹುಮಾನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಧಾರ್ಮಿಕ ದತ್ತಿ ಸಹಾಯಕ ನಿರ್ದೇಶಕರಾದ ಇ ದಿನೇಶ್, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಂಗಣ್ಣ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…