2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ : ಘಾಟಿ ಜಾತ್ರೆಯ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ, ಮೇಳೇಕೋಟೆ ಗ್ರಾಮ ಪಂಚಾಯಿತಿ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2.17 ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಚಾಲನೆ ನೀಡಿದರು.

ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 161.98 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಸಿ.ಸಿ ರಸ್ತೆ, ಚರಂಡಿ, ಅಂಗನವಾಡಿ ದುರಸ್ಥಿ, ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 21 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಎನ್.ಆರ್.ಎಲ್.ಎಂ ಭವನದಲ್ಲಿ ವಿಶೇಷ ಚೇತನರ ಉಪಯೋಗಕ್ಕಾಗಿ ರ್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 34.99 ಲಕ್ಷ ರೂಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಶುದ್ಧ ಕುಡಿಯುವ ನೀರು ಘಟಕ ಯಂತ್ರೋಪಕರಣ ಅಳವಡಿಕೆಗೆ ಚಾಲನೆ ನೀಡಿದರು.

*ಘಾಟಿ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಣೆ*

ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವತಿಯಿಂದ ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ಈ ವರ್ಷ ನಡೆದ ರಾಸುಗಳ ಜಾತ್ರೆಯಲ್ಲಿ ಭಾಗವಹಿಸಿದ್ದ ಉತ್ತಮ ರಾಸುಗಳ ವಿಜೇತ ಮಾಲೀಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಬಹುಮಾನ ವಿತರಿಸಿ ಸನ್ಮಾನಿಸಿ ಮಾತನಾಡಿ ಒಕ್ಕಲು ಮಕ್ಕಳಾದ ನಾವು ಪಶು ಸಂಪತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಘಾಟಿ ಅಭಿವೃದ್ಧಿ ಪ್ರಾಧಿಕಾರ ಉತ್ತಮ ಕೆಲಸ ಮಾಡುತಿದ್ದು ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲು ಬದ್ದನಾಗಿದ್ದು, ತಮ್ಮ ತಾತ ತಂದೆಯ ಕಾಲದಲ್ಲಿ ಜಾತ್ರೆಗೆ ಭಾಗವಹಿಸುತಿದ್ದುದನ್ನು ಸ್ಮರಿಸಿದರು.

ಹಾಲು ಹಲ್ಲಿನ ಹೋರಿಗಳಲ್ಲಿ ಪ್ರಥಮ ಬಹುಮಾನವಾಗಿ ಹೊಸಕೋಟೆ ತಾಲ್ಲೂಕಿನ ತರಬರಹಳ್ಳಿಯ ನಾರಾಯಣಸ್ವಾಮಿ, ಬಾಯಿ ಗೂಡಿದ ಜೋಡಿ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕು ಚೆನ್ನಹಳ್ಳಿ ಗ್ರಾಮದ ಮುನಿಯಪ್ಪ, ಹಾಲು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ಬೆಂ.ನಗರ ಜಿಲ್ಲೆಯ ಜಕ್ಕೂರಿನ ಜಶ್ವಂತ್, ಆರು ಹಲ್ಲಿನ ಜೊತೆ ಎತ್ತುಗಳಲ್ಲಿ ಪ್ರಥಮ ಬಹುಮಾನವಾಗಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಆದರ್ಶ್, ನಾಲ್ಕು ಹಲ್ಲಿನ ಜೋಡಿ ಎತ್ತುಗಳಲ್ಲಿ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮಾನೆ ನಾರಾಯಣಪ್ಪ, ಆರು ಹಲ್ಲಿನ ಹೋರಿಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಗೆದ್ದಲಪಾಳ್ಯದ ಚಿಕ್ಕ ಮುನಿಯಪ್ಪ, ಎರಡು ಹಲ್ಲಿನ ಜೊತೆ ಎತ್ತುಗಳಲ್ಲಿ ದೇವನಹಳ್ಳಿ ಶ್ರೀನಿವಾಸ್ ಇವರುಗಳಿಗೆ ಪ್ರಥಮ ಬಹುಮಾನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಇಒ ಮುನಿರಾಜು, ಧಾರ್ಮಿಕ ದತ್ತಿ ಸಹಾಯಕ ನಿರ್ದೇಶಕರಾದ ಇ ದಿನೇಶ್, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಂಗಣ್ಣ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಜಗದೀಶ್, ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮುಗಿಯದ ಕೆ.ಎಚ್. ಮುನಿಯಪ್ಪ ಖಾತೆ ‘ಮುನಿಸು’: ಪ.ಜಾ ಎಡಗೈ ಸಮುದಾಯಕ್ಕೆ ಸಿಗುವುದೇ ಉನ್ನತ ಸ್ಥಾನ?: ಪ್ರಬಲ ಖಾತೆಗೆ ಹಿರಿಯ ನಾಯಕನ ಪಟ್ಟು

ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…

4 hours ago

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

17 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

1 day ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

1 day ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

1 day ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

2 days ago